ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ವಿವಿಧ ಕಾಮಗಾರಿ ಕೆಲಸವನ್ನು ವೀಕ್ಷಿಸುವ ಉದ್ದೇಶದಿಂದ ಸಂಸದರಾದ ಬಿ. ವೈ. ರಾಘವೇಂದ್ರ ಅವರು, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ ಅವರು ಶಿಕಾರಿಪುರ
ಮಹಿಳಾ ಮೋರ್ಚಾ ಕಾರ್ಯಕರ್ತರು ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಕೆಲಸವನ್ನು ವೀಕ್ಷಿಸಿದರು.

ಶಿಕಾರಿಪುರ ತಾಲೂಕು ಬಿಜೆಪಿ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಬೋವಿ ಸಮಾಜದ ನಿರ್ದೇಶಕರಾದ ಆನಂದ , ವಿಧಾನ ಪರಿಷತ್ ಸದಸ್ಯರಾದ ರುದ್ರೆ ಗೌಡ್ರು , ಸಿಮ್ಸ್ ಆಡಳಿತ ಮಂಡಳಿ ನಿರ್ದೇಶಕರಾದ ದಿವಾಕರ್ ಶೆಟ್ಟಿ , ಜಂಗಲ್ ಲಾಡ್ಜ್ ನಿರ್ದೇಶಕರಾದ ರಾಜೇಶ್ ಕಾಮತ್, ಮಂಗೋಟಿ ರುದ್ರೇಶ್, ಗಣೇಶ್, ಶಿಕಾರಿಪುರ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೂಪ. ಮತ್ತಿತರು ಹಾಗೂ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…