ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಇಂದು ಶಿವಮೊಗ್ಗ ನಗರದ ಕೋರ್ಟ್ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಗೌರವಾಧ್ಯಕ್ಷರಾದ ಶ್ರೀ ರಮೇಶ್ ಹೆಗ್ಡೆರವರು, ಅಧ್ಯಕ್ಷರಾದ ಶ್ರೀ ಚೇತನ್ ಕೆ ರವರು, ಗೋ ರಮೇಶ್ ಗೌಡ ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ವೈಶಾಲಿರವರು, ಆರ್.ಟಿ.ಓ ಆಯುಕ್ತರಾದ ಶ್ರೀ ದೀಪಕ್ ಗೌಡ, ಶಿವಮೊಗ್ಗ ಡಿ.ವೈ.ಎಸ್.ಪಿ ಬಾಲರಾಜ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀಕಾಂತ್, ಒಕ್ಕಲಿಗರ ಯುವ ವೇದಿಕೆಯ ಉಪಾಧ್ಯಕ್ಷರಾದ ಗುರುರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ರಘುಗೌಡ, ಖಜಾಂಚಿ ಸುನಿಲ್ ಗೌಡ, ಸಹ ಕಾರ್ಯದರ್ಶಿ ಪ್ರಜ್ವಲ್ ಗೌಡ, ಎಲ್ಲಾ ನಿರ್ದೇಶಕರು, ಮಹಾನಗರ ಪಾಲಿಕೆ ಸದಸ್ಯರಾದ ಯಮುನಾ ರಂಗೇಗೌಡ, ಮೆಸ್ಕಾಂ ನಿರ್ದೇಶಕರಾದ ದಿನೇಶ್, ಒಕ್ಕಲಿಗ ಸಮುದಾಯದ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…