ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ, ತರಬೇತಿ ಹಾಗೂ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಕೆ,ಬಿ. ಅಶೋಕ್ ನಾಯ್ಕ್, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಪ್ರಮುಖರಾದ ಎಸ್. ದತ್ತಾತ್ರಿ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಉಪಮೇಯರ್ ಶಂಕರ್ ಗನ್ನಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…