ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ದಕ್ಷಿಣ ರಾಜ್ಯಗಳ ಪೆಂಕಾಕ್ ಸಿಲಾತ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ನಗರದ ಇಂಡೋರ್ ಸ್ಟೇಡಿಯಂನಲ್ಲಿ ರಾಜ್ಯ ಮತ್ತು ಜಿಲ್ಲಾ ಪೆಂಕಾಕ್ ಸಿಲಾಟ್ ಸ್ಫೋಟ್ರ್ಸ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಕರ್ನಾಟಕ ತಂಡವು 165 ಪಾಯಿಂಟ್ಗ ಳನ್ನು ಪಡೆಯುವ ಮೂಲಕ ಓವರ್ ಆಲ್ ಚಾಂಪಿಯನ್ ಪ್ರಶಸ್ತಿ (ಸಮಗ್ರ) 2022ನ್ನು ಪಡೆದಿದೆ.ಈ ಪ್ರಶಸ್ತಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸ್ವಾಮಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೆಂಕಾಕ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್ ಭಟ್, ಅಧ್ಯಕ್ಷ ಕುಮಾರ್ ವಿ. ನಾಯ್ಡು, ರಾಜ್ಯ ಕಾರ್ಯದರ್ಶಿ ವಿಜಯ್ಕುತಮಾರ್, ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್ ಮುಂತಾದವರು ಇದ್ದರು.ಮುಂದಿನ ಡಿಸೆಂಬರ್ ತಿಂಗಳಲ್ಲಿ ಶಿವಮೊಗ್ಗದಲ್ಲಿಯೇ ರಾಷ್ಟ್ರೀಯ ಚಾಂಪಿಯನ್ ಶಿಪ್ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಚಂದ್ರಕಾಂತ್ ಜಿ. ಭಟ್ ತಿಳಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…