ಜಯ ಕರ್ನಾಟಕ ಜನಪರ ವೇದಿಕೆ ಮತ್ತು ಐಕೇರ್ ಬ್ರಿಗೇಡ್ ಸಂಸ್ಥೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೊಡ್ಡಬಳ್ಳಾಪುರ ತಾಲ್ಲೂಕಿನ, ತೂಬಗೆರೆ ಹೋಬಳಿಯ, ಗೊಲ್ಲಹಳ್ಳಿ ಹತ್ತಿರವಿರುವ, ಎಸ್.ಎಸ್. ಘಾಟಿ ರಾಜ್ಯ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ, ಗಿಡಗಳನ್ನು ನೆಡುವ ಮುಖಾಂತರ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದ ಯುವ ಸಂಸ್ಥಾಪಕ ಅಧ್ಯಕ್ಷರಾದ ಗುಣರಂಜನ್ ಶೆಟ್ಟಿ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ, ಪರಿಸರವಾದಿಗಳಿಗೆ, ಗಣ್ಯರಿಗೆ, ರಾಜ್ಯ ಸಮಿತಿಯ ಪದಾಧಿಕಾರಿಗಳು, ಬೆಂಗಳೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳು,ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,ಮಹಿಳಾ ಪದಾಧಿಕಾರಿಗಳು ಮತ್ತು ಮುಖಂಡರು, ಹೋಟೆಲ್‌ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಮತ್ತು ಸರ್ವ ಸದಸ್ಯರಿಗೆ.

ವಿಶೇಷವಾಗಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಸ್ಥಳೀಯ ಅರಣ್ಯ ಅಧಿಕಾರಿಗಳಿಗೆ, ಐಕೇರ್ ಬ್ರಿಗೇಡ್ ಸಂಸ್ಥೆಯ ಪದಾಧಿಕಾರಿಗಳಿಗೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೊಡ್ಡಬಳ್ಳಾಪುರ ತಾಲ್ಲೂಕಿನ ಮಹಿಳಾ ಮುಖಂಡರಾದ ಶ್ರೀಮತಿ ನಾಗಲಕ್ಷ್ಮಿ, ಮುಖಂಡರಾದ ರಾಜೇಂದ್ರ ಪ್ರಸಾದ್ ಮತ್ತು ತಂಡದವರಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…