ಶಿವಮೊಗ್ಗ: ಇಂದು ಶಿವಮೊಗ್ಗ ನಗರದ ವಾರ್ಡ್ ನಂಬರ್ ಎರಡರ ಎಲ್.ಬಿ.ಎಸ್. ನಗರ, ಅಶ್ವತ್ಥ್ ನಗರ, ವೆಂಕಟಾಪುರ, ಕೀರ್ತಿನಗರದ ಟ್ರಾಫಿಕ್ ಸಮಸ್ಯೆ ಬಗ್ಗೆ ಟ್ರಾಫಿಕ್ ಸರ್ಕಲ್ ಇನ್ಸ್ ಪೆಕ್ಟರ್ ಆದ ಸಿದ್ಧನಗೌಡ ಅವರನ್ನು ಕರೆಸಿ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವಾಸ್ ಹಾಗೂ ಸ್ಥಳೀಯ ನಿವಾಸಿಗಳು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಿದರು.

ಈ ಸಮಯದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಾದ ಪಿಎಸ್ಸೈ ತಿಮ್ಮಪ್ಪ, ಮೋಹನ್ ಹಾಗೂ ಸ್ಥಳೀಯರಾದ ಚಂದ್ರಶೇಖರ್, ಶೇಖರ್, ಶರತ್ ಇನ್ನಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…