ಕರ್ನಾಟಕದೆಲ್ಲೆಡೆ ಹಬ್ಬದ ಸಂತಸ ಇಂದು ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ . ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲಾಗಿದೆ. ಇದರಲ್ಲಿ ವಿಶೇಷವಾಗಿ ಶಿವಮೊಗ್ಗದಲ್ಲಿ ಒಕ್ಕಲಿಗರ ಸಂಘದಿಂದ ಆಚರಿಸಿದ ನಾಡಪ್ರಭು ಜಯಂತೋತ್ಸವ ಮಾದರಿಯಾಗಿದೆ. ಇಂದು ಸುಮಾರು 250 ಜನಕ್ಕೆ ಕೋವಿಡ ಟೆಸ್ಟ್ ಮಾಡಿಸುವ ಮೂಲಕ ವಿಶೇಷವಾಗಿ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷರಾದ ರಮೇಶ್ ಗೌಡ ಅವರು ಮಾತನಾಡಿ 512ನೇ ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವುದು ಸಂತಸ ತಂದಿದೆ ಎಂದು ತಿಳಿಸಿದರು. ಈ ಸಮಯದಲ್ಲಿ ಮಾತನಾಡಿದ ನ್ಯೂಸ್ ವಾರಿಯರ್ಸ್ ಪತ್ರಿಕೆಯ ಸಂಪಾದಕರಾದ ರಘುರಾಜ್ ರವರು ಕೆಂಪೇಗೌಡರವರು ಇಡೀ ಕರ್ನಾಟಕದ ಆಸ್ತಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಸುರೇಖಾ ಸುರೇಂದ್ರ ಮುಂತಾದವರು ಉಪಸ್ಥಿತರಿದ್ದರು


ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153