ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ಅಶೀರ್ವಾದದೊಂದಿಗೆ ಜಿಲ್ಲಾ ಒಕ್ಕಲಿಗರ ಸಂಘ ಶಿವಮೊಗ್ಗ, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಶಿವಮೊಗ್ಗ, ಜಿಲ್ಲಾ ಚುಂಚಾದ್ರಿ ಮಹಿಳಾ ವೇದಿಕೆ, ಮಲೆನಾಡು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಚುಂಚಾದ್ರಿ ಮಹಿಳಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ, ನಾಡಪ್ರಭು ಕೆಂಪೇಗೌಡ ಸಂಘ ಇದರ ಸಹಯೋಗದೊಂದಿಗೆ ಶಿವಮೊಗ್ಗ ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬೆಂಗಳೂರು ನಿರ್ಮಾತೃ “ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ” ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀ ಶ್ರೀಕಾಂತ್, ಮಾಜಿ ಅಧ್ಯಕ್ಷರಾದ ಕಡಿದಾಳ್ ಗೋಪಾಲ್, ಪದ್ಮನಾಭ, ಮಹಾನಗರ ಪಾಲಿಕೆ ಸದಸ್ಯರು, ಸಮಾಜದ ಮುಖಂಡರಾದ ಶ್ರೀ ಬಿ.ಎ.ರಮೇಶ್ ಹೆಗ್ಡೆರವರು, ಒಕ್ಕಲಿಗರ ಸಂಘದ ಕಾರ್ಯದರ್ಶಿ ಆಶಿತ್ ರವರು, ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ಸುವರ್ಣ ಶಂಕರ್ ರವರು, ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರು, ಒಕ್ಕಲಿಗರ ಸಂಘದ ನಿರ್ದೇಶಕರಾದ ಶ್ರೀ ಚೇತನ್ ಗೌಡರವರು, ನಿರ್ದೇಶಕರಾದ ಸಿ.ಎನ್.ಮೂರ್ತಿರವರು, ಚುಂಚಾದ್ರಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ಭಾರತಿ ರಾಮಕೃಷ್ಣರವರು, ಚುಂಚಾದ್ರಿ ಮಹಿಳಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಶಾರದಾ ಶೇಷಗಿರಿ ಗೌಡ, ಮಹಿಳಾ ಮುಖಂಡರಾದ ನಾಗರತ್ನ, ಮಾಲಾ ರಾಮಪ್ಪರವರು, ಮಲೆನಾಡು ಕ್ರೆಡಿಟ್ ಕೋ ಆಪರೇಟಿವ್ ನಿರ್ದೇಶಕರಾದ ಎನ್ ದಿನೇಶ್ ರವರು, ಒಕ್ಕಲಿಗ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ರಘುಗೌಡ, ಒಕ್ಕಲಿಗರ ಯುವ ವೇದಿಕೆಯ ಮುಖಂಡುರುಗಳಾದ ಎಸ್.ಕೆ.ರಾಘವೇಂದ್ರ, ಗುರುರಾಜ್, ಪ್ರಮೋದ್ ಅರುಣ್, ವೈಭವ್ ಸೇರಿದಂತೆ ಹಲವಾರು ಒಕ್ಕಲಿಗ ಯುವ ಮುಖಂಡರುಗಳು, ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಭಾಂದವರು ಉಪಸ್ಥಿತರಿದ್ದರು…

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ