ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಲಾದ 75ನೇ ಭಾರತ ಸ್ವಾತಂತ್ರದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿಯವರು,ವಿಧಾನಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಲೇಖನ,ಸಾಹಿತ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿಯನ್ನು ಬೆಳೆಸುವ ಸದರಿ ಸಂಸ್ಥೆಯ ಶ್ರಮದ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಮಾನ್ಯ ಶಾಸಕರಿಗೆ ಸನ್ಮಾನಿಸಲಾಯಿತು.

ವರದಿ ಮಂಜುನಾಥ್ ಶೆಟ್ಟಿ…