ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘ, ಶಿವಮೊಗ್ಗ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪೌರ ಕಾರ್ಮಿಕರಿಗೆ ಸ್ಯಾನಿಟೇಷನ್ ಅಧ್ಯಯನ ಪ್ರವಾಸ ಏರ್ಪಡಿಸಿದ್ದು, ತಿರುಪತಿ, ತಿರುಮಲ ಮತ್ತು ಕಾಳಹಸ್ತಿಗೆ 198 ಸಿಬ್ಬಂದಿಗಳ ಮೊದಲ ತಂಡಕ್ಕೆ ಮೇಯರ್ ಚಾಲನೆ ನೀಡಿದರು.

ಸುಮಾರು 5 ಬಸ್ ಗಳಲ್ಲಿ ಈ ತಂಡ ಹೊರಟಿದ್ದು, ಇಂದು ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಉಪ ಮೇಯರ್ ಶಂಕರ್ ಗನ್ನಿ, ಆಯುಕ್ತ ಮಾಯಣ್ಣಗೌಡ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಮಾರಪ್ಪ, ಕಾರ್ಯದರ್ಶಿ ಗೋವಿಂದ್, ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್, ಇ. ವಿಶ್ವಾಸ್ ಇದ್ದರು.

ವರದಿ ಮಂಜುನಾಥ್ ಶೆಟ್ಟಿ…