ದೆಹಲಿ ನ್ಯೂಸ್…

ಶಿವಮೊಗ್ಗ ಲೋಕಸಭಾ ಸಂಸತ್ ಸದಸ್ಯರಾದ ಶ್ರೀ ಬಿ ವೈ ರಾಘವೇಂದ್ರ ರವರು ಕೇಂದ್ರ ನಾಗರಿಕ ವಿಮಾನಯಾನ ಹಾಗೂ ಉಕ್ಕು ಖಾತೆಯ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ರವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.

ಶಿವಮೊಗ್ಗ ಏರ್ಪೋರ್ಟ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡಿದರು. ಜೊತೆಗೆ ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆ ಮಾನ್ಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಸಹಕಾರವನ್ನು ನೀಡಲು ಕೋರಿಕೊಂಡರು.

ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರಕ್ಕೆ (VISL). ಅಗತ್ಯ ಬಂಡವಾಳವನ್ನು ಹೂಡಿ ಪುನರುಜ್ಜೀವನಗೊಳಿಸಲು ಸೂಕ್ತ ಕ್ರಮಗಳನ್ನು ಕೈಕೊಳ್ಳಲು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ VISL ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷರಾದ ಶ್ರೀರಾಮಲಿಂಗಯ್ಯ ಹಾಗೂ ಗೌರವಾಧ್ಯಕ್ಷರಾದ ಶ್ರೀ ನಾಗಭೂಷಣ್ ರವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…