ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಪ್ರಸನ್ನ ಗೌಡರ ನೇತೃತ್ವದಲ್ಲಿ ಪ್ರಧಾನ ಕಚೇರಿಯಲ್ಲಿ ನೂತನ ಕಾರ್ಯಕರ್ತರ ಸೇರ್ಪಡೆ ಹಾಗೂ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ದಾಮೋದರ್ ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಭುವನ್ ಹಾಗೂ ಆಟೋ ಘಟಕದ ಅಧ್ಯಕ್ಷರಾಗಿ ಶಿವರಾಜ್ ಆಯ್ಕೆಯಾದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಉಮೇಶ್ ಗೌಡ್ರು ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ ನಗರ ಘಟಕದ ಅಧ್ಯಕ್ಷರಾದ ಮಂಜು ಹಾಗೂ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಭಾಗಿಯಾಗಿದ್ದರು.

ವರದಿ ಮಂಜುನಾಥ್ ಶೆಟ್ಟಿ…