ಶಿವಮೊಗ್ಗ ಜಿಲ್ಲೆಯಲ್ಲಿ ವೀರ ಸಾವರ್ಕರ್ ರವರ ಭಾವಚಿತ್ರ ತೆರವಿಗೆ ಸಂಬಂಧಿಸಿದಂತೆ ಸ್ವಾತಂತ್ರ್ಯ ದಿನದಂದು ನಡೆದ ಗಲಭೆಯಲ್ಲಿ ಉಪ್ಪಾರಕೇರಿಯ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಕೆಲವು ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಯವರಾದ ಶ್ರೀ ಬಿ.ಎಲ್ ಸಂತೋಷ ರವರೊಂದಿಗೆ ಕೆ.ಎಸ್.ಈಶ್ವರಪ್ಪನವರು ಹಾಗೂ ಸಂಸದರಾದ ಬಿ.ವೈ. ರಾಘವೇಂದ್ರ ಭೇಟಿ ಮಾಡಿದರು.

ಪ್ರೇಮ್ ಸಿಂಗ್ ಆರೋಗ್ಯವನ್ನು ವಿಚಾರಿಸಿ, ಶೀಘ್ರ ಗುಣಮುಖವಾಗಲೆಂದು ತಿಳಿಸಿ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಕೆ.ಇ.ಕಾಂತೇಶ್ , ಎಸ್.ದತ್ತಾತ್ರಿ , ಚನ್ನಬಸಪ್ಪ ,ಮೇಯರ್ ಸುನಿತಾ ಅಣ್ಣಪ್ಪ ಉಪಮೇಯರ್ ಶಂಕರ್ ಗನ್ನಿ ಮತ್ತು ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…