ಬಿಜೆಪಿ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣೆ ಸಮಿತಿ ಪುನರ್ ರಚನೆಗೊಂಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡಾ ರವರ ನೇತೃತ್ವದಲ್ಲಿ ನೂತನ ಸಮಿತಿ ರಚನೆಗೊಂಡಿದೆ.

ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ರವರನ್ನು ನೂತನ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ. ಬಿ.ಎಸ್.ವೈ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 140 ಹೆಚ್ಚು ಸ್ಥಾನ ಪಡೆದು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತರಲು ಶ್ರಮಿಸುತ್ತೇನೆ ಎಂದರು.

ವರದಿ ಪ್ರಜಾಶಕ್ತಿ…