ದೇವಾಂಗ ಸಮಾಜ ವತಿಯಿಂದ ಹಿತ್ತಲ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ಶುಕ್ರವಾರದ ಪೂಜೆಗೆ ಸಲ್ಲಿಸಿ, ಸಮುದಾಯ ಭವನದ ಮುಂದುವರೆದ ಕಾಮಗಾರಿಯ ಚಾಲನೆಯನ್ನು
ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿದರು.

ಶ್ರೀ ಸಿದ್ದೇಶ್ವರ ದೇವಸ್ಥಾನದ ದಾಸೋಹ ಕೋಠಡಿಯನ್ನು, ಶ್ರೀ ಮಾರಿಕಾಂಬಾ ದೇವಸ್ಥಾನದ ಸಮುದಾಯ ಭವನ, ಬಾಬು ಜಗಜೀವನ್ ರಾಂ ಭವನ ಹಾಗೂ ಚುರ್ಚಿಗುಂಡಿ ಗ್ರಾಮದಲ್ಲಿ ಈಶ್ವರ ಬಸವೇಶ್ವರ ದೇವಸ್ಥಾನದ ಸಮುದಾಯ ಭವನದ ಉದ್ಘಾಟನೆಯನ್ನು ಸಂಸದರಾದ ಬಿ. ವೈ. ರಾಘವೇಂದ್ರ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು.

ಉತ್ಸವ ಸಮಿತಿಯ ಶಿವಮೂರ್ತಿ ಅವರು , ಗ್ರಾಪಂ ಅಧ್ಯಕ್ಷರಾದ ಸರ್ವೇಶ್,ತಾಲೂಕು ಬಿಜೆಪಿ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಕೊರಲಹಳ್ಳಿ ನಾಗರಾಜ್. ಶಶಿ ಚುರ್ಚಿಗುಂಡಿ,ಮಂಜುಳಾ ಪ್ರಕಾಶ್, ಬಿ. ಡಿ ಭೂಕಂತ, ಎಲ್ಲಾ ಸಮಾಜದ ಅಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…