ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ 110ಕ್ಕೂ ಹೆಚ್ಚು ಹೆಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ಗಳನ್ನು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ರವರ ನೇತೃತ್ವದಲ್ಲಿ ವಿತರಣೆ ಮಾಡಿದರು. ನಂತರ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಈಗಾಗಲೇ ಯುವ ಕಾಂಗ್ರೆಸ್ ರಾಜ್ಯಾದ್ಯಂತ ಸಂಕಷ್ಟದಲ್ಲಿರುವ ಶ್ರೀಸಾಮಾನ್ಯನಿಗೆ ನೆರವಿನ ಕಾರ್ಯಗಳನ್ನು ಮಾಡುತ್ತಿದ್ದು ಇಂದು ಸರ್ಕಾರ ಅವೈಜ್ಞಾನಿಕ ಲಾಕ್ ಡೌನ್ ಘೋಷಿಸಿ ಬೇಕಾಬಿಟ್ಟಿ ಪ್ಯಾಕೇಜುಗಳನ್ನು ಘೋಷಿಸಿದ್ದು ಕೂಡಲೇ ಎಲ್ಲಾ ಸ್ತರ ವರ್ಗದ ಹಾಗೂ ಇಂತಹ ಸೋಂಕಿತರಿಗೆ ವಿಶೇಷ ಪ್ಯಾಕೇಜನ್ನು ಘೋಷಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್ ಕಿರಣ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮರೇಶ್ , ಪದಾಧಿಕಾರಿಗಳಾದ ಅರುಣ್ ನವುಲೆ, ಗಗನ್ ಗೌಡ, ಇರ್ಫಾನ್, ವೆಂಕಟೇಶ್ ಕಲ್ಲೂರು, ರಾಹುಲ್, ಇತರರು ಉಪಸ್ಥಿತರಿದ್ದರು

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153