ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ “ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ” ಕುರಿತು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹೈ ಕೋರ್ಟ್ ನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾನ್ ಓಟದ ಭಿತ್ತಿಪತ್ರವನ್ನ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿರವರು ಬಿಡುಗಡೆಗೊಳಿಸಿದರು.

ಸೆಪ್ಟೆಂಬರ್ 17 ರಂದು ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನದ ಅಂಗವಾಗಿ ನವದೆಹಲಿಯಲ್ಲಿ “ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ” ದ ಕುರಿತು ರಾಷ್ಟ್ರ ಮಟ್ಟದಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಭವನದಿಂದ ಕೆಂಪು ಕೋಟೆವರೆಗೂ ತಡೆರಹಿತವಾಗಿ 3 ಗಂಟೆಗಳ ಕಾಲ ಮ್ಯಾರಥಾನ್ ಓಟದ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದರ ಭಿತ್ತಿ ಪತ್ರವನ್ನ ಬಿಡುಗಡೆಗೊಳಿಸಿ ಕರ್ನಾಟಕದ ವ್ಯಕ್ತಿಯೊಬ್ಬ ರಾಷ್ಟ್ರಮಟ್ಟದಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಈ ಪ್ರಯತ್ನ ಪ್ರಶಂಶನೀಯ, ಅಕ್ರಮ ಮತದಾನವನ್ನ ತಡೆಯಲು ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಮತದಾನದ ಗುರುತಿನ ಚೀಟಿಯನ್ನ ಆಧಾರ್ ಗೆ ಜೋಡಣೆ ಮಾಡುವಂತೆ ತಿಳಿಸಿದರು.

ವರದಿ ಪ್ರಜಾಶಕ್ತಿ…