ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಆಯ್ಕೆಯಾಗಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದು ಅವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿದರು.

ಬಿ.ಎಸ್.ಯಡಿಯೂರಪ್ಪ ಮಾತನಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 150 ಹೆಚ್ಚು ಸ್ಥಾನ ಪಡೆಯಲಿದೆ. ರಾಜ್ಯ , ದೇಶಾದ್ಯಂತ ಪ್ರವಾಸ ಮಾಡಿ ಬಿಜೆಪಿ ವರಿಷ್ಠರು ಹೇಳಿದಂತೆ ಪಕ್ಷ ಸಂಘಟಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಗೃಹ ಸಚಿವ ಹಾರ್ದಿಕ ಆರಗ ಜ್ಞಾನೇಂದ್ರ , ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ,ಶಾಸಕ ಕೆ.ಎಸ್. ಈಶ್ವರಪ್ಪ ಸಂಸದ ಬಿ.ವೈ.ರಾಘವೇಂದ್ರ, ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ,ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮುಂತಾದ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…