ಶಿವಮೊಗ್ಗ ನಗರದ ಬಿಜೆಪಿ ಗ್ರಾಮಾಂತರ ಕಾರ್ಯಾಲಯದಲ್ಲಿ ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಆಯ್ಕೆಯಾಗಿರುವ ನಮ್ಮೆಲ್ಲರ ನೆಚ್ಚಿನ ಹಾಗೂ ರೈತಪರವಾದ ನಾಯಕರಾದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷವನ್ನು ಬಲಗೊಳಿಸುವಲ್ಲಿ ನಾವೆಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.ಪ್ರತೀ ವಿಧಾನ ಸಭಾ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಯುವ ಸಮುದಾಯವನ್ನು ಬಲಪಡಿಸಬೇಕು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿಶ್ವಾಸಗಳಿಸಿಕೊಂಡು ಈ ಭಾರಿ 150 ಸ್ಥಾನವನ್ನು ಗಳಿಸುವಲ್ಲಿ ನಾವೆಲ್ಲರೂ ಸೇರಿ ಶ್ರಮವಹಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ಕೊಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಾ. ಕೆ.ಸಿ ನಾರಾಯಣ ಗೌಡ ವರು, ಮಾಜಿ ಸಚಿವ ಸಚಿವರಾದ ಶ್ರೀ ಕೆ.ಎಸ್ ಈಶ್ಚರಪ್ಪ ,ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರರವರು,ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ ,ಗ್ರಾಮಾಂತರ ಶಾಸಕರರಾದ ಶ್ರೀ ಕೆ.ಬಿ ಅಶೋಕ್ ನಾಯ್ಕ್ ,ಸಾಗರ ಕ್ಷೇತ್ರ ಶಾಸಕರಾದ ಶ್ರೀ ಹೆಚ್. ಹಾಲಪ್ಪ ಹರತಾಳು ,ಸೊರಬ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಬಂಗಾರಪ್ಪ ರವರು, ವಿಧಾನ ಪರಿಷತ್ ಶಾಸಕರಾದ ಶ್ರೀ ಆಯನೂರು ಮಂಜುನಾಥ್ ರವರು, ಶ್ರೀ ಎಸ್. ರುದ್ರೆಗೌಡ ರವರು, ಶ್ರೀಮತಿ ಭಾರತಿ ಶೆಟ್ಟಿ ರವರು, ಶ್ರೀ ಡಿ.ಎಸ್ ಅರುಣ್ ರವರು, ಮಾನ್ಯ ಎಂ.ಎ.ಡಿ.ಬಿ ಅಧ್ಯಕ್ಷರಾದ ಶ್ರೀ ಕೆ.ಎಸ್ ಗುರುಮೂರ್ತಿರವರು, ಮತ್ತು ಪಕ್ಷದ ಮುಖಂಡರು ಹಾಗೂ ಕಾರ್ಯ ಕರ್ತರು ಹಾಜರಿದ್ದರು.

ವರದಿ ಪ್ರಜಾಶಕ್ತಿ…