ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉದ್ಘಾಟಿಸಿದರು.

ನಂತರ ಮಾತನಾಡಿದ ಬಿ ವೈ ವಿಜಯೇಂದ್ರ ರವರು ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ನೋಡಿ ಕಾಂಗ್ರೆಸ್ ನಾಯಕರುಗಳು ತಂಡ ಹೊಡೆದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನವರು ಗೆದ್ದು ಅಧಿಕಾರಕ್ಕೆ ಬರುತ್ತವೆ ಎಂಬ ಭ್ರಮೆಯಲ್ಲಿದ್ದರು. ಈ ಸಮಾವೇಶ ನಾಯಕರುಗಳಿಗೆ ಉತ್ತರ ಕೊಟ್ಟಿದೆ. ಬಿ ಎಸ್ ಯಡಿಯೂರಪ್ಪ ರವರ ನೇತೃತ್ವದಲ್ಲಿ ರಾಜ್ಯ ಪ್ರವಾಸ ಮಾಡಿ 150 ಹೆಚ್ಚು ಸೀಟು ಪಡೆದು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್ ರವರು ವಹಿಸಿದ್ದರು.ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್,ಸಹ ಪ್ರಭಾರಿಗಳಾದ ಎನ್ ಎಸ್ ಹೆಗಡೆ, ವಿಭಾಗ ಸಹ ಸಂಘಟನಾ ಪ್ರದಾನ ಕಾರ್ಯದರ್ಶಿ ಎ ಎನ್ ನಟರಾಜ್, ಜಿಲ್ಲಾ ಪ್ರಭಾರಿಗಳಾದ ಮೋನಪ್ಪ ಭಂಡಾರಿ, ಸಹ ಪ್ರಭಾರಿ ಆರ್ ಡಿ ಹೆಗಡೆ ,ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಬಿ ಕೆ ಶ್ರೀನಾಥ್, ಶಿವರಾಜ್, ನವೀನ್ ಹೆದ್ದೂರು, ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…