ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹೆಚ್ ಕೆ ಜಂಕ್ಷನ್ ನಲ್ಲಿ ಪೆಟ್ರೋಲ್ ಬಂಕ್ ತೆರೆಯಲು ಕಾಮಗಾರಿ ಪ್ರಾರಂಭವಾಗಿದ್ದು ಇದು ನಿಯಮ ಬಾಹಿರ ಕ್ರಮವಾಗಿದೆ.ಪೆಟ್ರೋಲ್ ಬಂಕ್ ಬಳಿ ಯಾವುದೇ ಶಾಲೆ , ವಸತಿ ನಿಲಯಗಳು ಇರಬಾರದು ಎಂಬ ನಿಯಮವಿದ್ದರೂ ಜಿಲ್ಲೆಯ ಜಿಲ್ಲಾಡಳಿತ , ಅಗ್ನಿಶಾಮಕ ದಳ , ಲೋಕೋಪಯೋಗಿ ಇಲಾಖೆ , ಪೊಲೀಸ್ ಇಲಾಖೆ , ಆರೋಗ್ಯ ಇಲಾಖೆ ಹಾಗೂ ಉಪ ವಿಭಾಗಾಧಿಕಾರಿಗಳು ಕಣ್ಣ ಮುಚ್ಚಿ ಪೆಟ್ರೋಲ್ ಬಂಕ್ ತೆರೆಯಲು ನಿರಪೇಕ್ಷಣಾ ಪತ್ರ ಗಳನ್ನು ನೀಡಿ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅನುಮತಿ ನೀಡಿದೆ.

ಮುಂದಿನ ದಿನಗಳಲ್ಲಿ ಏನಾದರೂ ಅನಾಹುತ ಸಂಭವಿಸಿದರೆ ಮಕ್ಕಳ ಮಾರಣ ಹೋಮವೇ ನಡೆದು ಹೋಗುವ ಅಪಾಯವಿದೆ ಇದಕ್ಕೆ ಜಿಲ್ಲಾಡಳಿತ ಸಂಪೂರ್ಣ ಹೊಣೆ ಹೊರಬೇಕಾಗುತ್ತದೆ .ಈ ಬಗ್ಗೆ ಸ್ಥಳೀಯ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಈಡಾಗಿದ್ದಾರೆ .ಆದುದರಿಂದ ಈ ಕುಡಲ ನಿಯಮಬಾಹಿರವಾಗಿ ನೀಡಿರುವ ಅನುಮತಿಯನ್ನು ರದ್ದು ಪಡಿಸಲು ಕೋರುತ್ತೇವೆ .ಹಾಗೂ ಕೂಡಲೇ ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚಿಸಲು ಕೋರುತ್ತೇವೆ .ಇಲ್ಲದಿದ್ದ ಪಕ್ಷದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರೊಡನೆ ಸಂಘಟನೆಯಿಂದ ಉಗ್ರ ಪ್ರತಿಭಟನೆಯನ್ನು ನಡೆಸಲಾಗುವುದು .
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153