ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯ ಶ್ರೀ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಜೀವ ವೈವಿದ್ಯ ಹಾಗೂ ಕೃಷಿಗೆ ಸಂಬಂಧಿಸಿದ ಸಸಿ ಹಾಗೂ ಉತ್ಪನ್ನಗಳನ್ನು ವೀಕ್ಷಿಸಿ “10ನೇ ಸಂಸ್ಥಾಪನಾ ದಿನಾಚರಣೆ” ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ದಿವ್ಯ ಸಾನಿದ್ಯವನ್ನು ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರು,
ಕುಲಸಚಿವರಾದ ಆರ್.ಲೋಕೇಶ್, ಗೌರವಾನ್ವಿತ ಕುಲಪತಿಗಳಾದ ಡಾ. ಆರ್. ಸಿ. ಜಗದೀಶ
ಕೆ.ಶಿ.ನಾ.ಕೃ.ತೋ.ವಿ.ವಿ.ವಿ, ಶಿವಮೊಗ್ಗ, ಆಡಳಿತ ಮಂಡಳಿ ಸದಸ್ಯರಾದ ವೀರಭದ್ರಪ್ಪ ಪೂಜಾರಿ, ದೊಡ್ಡಗೌಡ ಸಿ. ಪಾಟೀಲ್‌, ನಾಗರಾಜ್, ಎಡೆಹಳ್ಳಿ ಗ್ರಾ. ಪಂ ಅಧ್ಯಕ್ಷರು ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಮತ್ತು ಇತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…