ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ರವರ ಹುಟ್ಟು ಹಬ್ಬವನ್ನು ಶಿವಮೊಗ್ಗ ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ಸಿಹಿ ವಿತರಿಸುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ , ಕೆಪಿಸಿಸಿ ಸಂಯೋಜಕರು ಕಾರ್ಯದರ್ಶಿ ಕೆ.ದೇವೇಂದ್ರಪ್ಪ , ದಕ್ಷಿಣ ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ವಿನಯ್ ತಂಡ್ಲೆ ,ರಾಜ್ಯ ಎನ್ ಎಸ್ ಯು ಐ. ಪ್ರಧಾನ ಕಾರ್ಯದರ್ಶಿ ಬಾಲಾಜಿ ,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ,ಯು ಶಿವಾನಂದ ಹಲವಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.

ವರದಿ ಪ್ರಜಾಶಕ್ತಿ…