ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ 40 ವರ್ಷ ಸೇವೆ ಸಲ್ಲಿಸಿ ಇತ್ತೀಚಿಗೆ ನಿಧನ ಹೊಂದಿದ ದಿ!ವಾಜಿದ್ ಸಾಹೇಬ್ರ ಮನೆಗೆ ಭೇಟಿ ನೀಡಿ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಮಿಥುನ್ ರೈ ರವರಿಂದ ಸಾಂತ್ವನ ನೀಡಿದರು .ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುಮಾರು ನಲ್ವತ್ತು ವರ್ಷಗಳ ಕಾಲ ಸೇವೆಗೈದು ಇತ್ತೀಚೆಗಷ್ಚೇ ನಿಧನಹೊಂದಿದ ದಿ! ವಾಜಿದ್ ರವರ ಮನೆಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಾಜ್ಯ ಯುವ ಕಾಂಗ್ರೆಸ್ ನಾಯಕ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ರವರ ನೇತೃತ್ವದಲ್ಲಿ ಭೇಟಿ ನೀಡಿ ಕುಟುಂಬಸ್ತರಿಗೆ ಸ್ವಾಂತನ ಹೇಳಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ದಿವಂಗತ ವಾಜಿದ್ ಸಾಹೇಬ್ರ ಅವರ ಕುಟುಂಬಸ್ಥರಿಗೆ ದಿನಸಿ ಸಾಮಗ್ರಿಗಳು ಮತ್ತು ಧನ ಸಹಾಯ ಮಾಡಿದರು. ನಂತರ ಮಾತನಾಡಿದ ಮಿಥುನ್ ರೈ ರವರು ವಾಜಿದ್ ಸಾಹೇಬ್ರು ಪಕ್ಷಕ್ಕೆ 40 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದು ಪಕ್ಷದ ಕಚೇರಿಗೆ ಬಂದಂತಹ ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದ ಅವರ ಸೇವೆ ಇಂತಹ ಸಂದರ್ಭದಲ್ಲಿ ಸ್ಮರಣೀಯವಾದದ್ದು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಎಸ್ ಕುಮರೇಶ್, ಗ್ರಾಮಾಂತರ ಅಧ್ಯಕ್ಷ ಈಟಿ ನಿತಿನ್, ಭದ್ರಾವತಿ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್ ಕುಮಾರ್ , ಭದ್ರಾವತಿ ಗ್ರಾಮಾಂತರ ಅಧ್ಯಕ್ಷ ಆಫ್ತಬ್, ಶಿಕಾರಿಪುರ ಪುರಸಭಾ ಸದಸ್ಯ ಮಯೂರ್ ದರ್ಶನ್, ಭದ್ರಾವತಿ ನಗರಸಭಾ ಸದಸ್ಯ ಶ್ರೇಯಸ್ (ಚಿಟ್ಟೆ), ಪದಾಧಿಕಾರಿಗಳಾದ ಉಮೇಶ್ ಬಾಳೆಗುಂಡಿ, ಅರುಣ್ ನವುಲೆ, ಇರ್ಫಾನ್, ಸಚಿನ್ ಸಿಂದೆ, ಇತರರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153