ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್ ನಲ್ಲಿ ಇರುವ ಗಣೇಶ್ ರೂಪಿಂಗ್ ಕಚೇರಿಯಲ್ಲಿ ಆಯುಧಪೂಜೆ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಸೇರಿದಂತೆ ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರಿಗೂ ಶುಭಹಾರೈಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಮಾತನಾಡಿ, ಆಯುಧ ಪೂಜೆ ಹಾಗೂ ನವರಾತ್ರಿಯನ್ನು ಎಲ್ಲರೂ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಕರೊನಾ ಕಾರಣದಿಂದ ಸಾರ್ವಜನಿಕವಾಗಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಎಲ್ಲೆಡೆ ದಸರಾ ಹಬ್ಬವನ್ನು ಸಂಭ್ರಮದಿAದ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ನಾಡದೇವತೆ ಶ್ರೀ ಚಾಮುಂಡೇಶ್ವರಿ ರಾಜ್ಯದ ಎಲ್ಲರ ಜನತೆಗೂ ಒಳಿತು ಮಾಡಲಿ, ಎಲ್ಲರಿಗೂ ಆರೋಗ್ಯ, ನೆಮ್ಮದಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ಗೋಪಿನಾಥ್, ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್, ನಿರ್ದೇಶಕ ಪ್ರದೀಪ್ ಎಲಿ, ವೀರಪ್ಪ ಎಲಿ, ವಿಶಾಲ ಎಲಿ, ಸುಮ ಎಲಿ, ಡಾ. ಶ್ರೇಯಾ ಎಲಿ, ಶಾಲಿನಿ ಕಾಂತೇಶ್, ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಕುಟುಂಬದ ಸದಸ್ಯರು, ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…