ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರ ಇಂದು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು. ರಾಹುಲ್ ಗಾಂಧಿ ರವರ ಭಾರತ ಐಕ್ಯತಾ ಯಾತ್ರೆ ಅಕ್ಟೋಬರ್ 10ರಂದು ಚಿತ್ರದುರ್ಗಕ್ಕೆ ಜಿಲ್ಲೆಗೆ ಬರುತ್ತಿದೆ. ಅಂದು ಶಿವಮೊಗ್ಗ ಜಿಲ್ಲೆಯಿಂದ ಎಲ್ಲಾ ತಾಲೂಕುಗಳಿಂದ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರ ಭೂಪಾಲ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಎಚ್ ಸಿ ಯೋಗೇಶ್, ಯಮುನಾ ರಂಗೇಗೌಡ, ಮೇಹಾಖ್ ಶರೀಫ್,ಹಾಗೂ ಇನ್ನೂ ಹಲವು ಮುಖಂಡರುಗಳು ,ಪ್ರಮುಖರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…