ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿಯಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ರವರು ಭಾಗವಹಿಸಿ, ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಜೀವನ ಕಥೆಯನ್ನು ಸಾರುವ ಪ್ರದರ್ಶಿನಿಯನ್ನು ವೀಕ್ಷಿಸಿ ‘ಸಮೃದ್ಧ ಸಾಹಿತ್ಯದ’ ಪುಸ್ತಕವನ್ನು ಖರೀದಿಸಿದರು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಸಚಿವರಾದ ಜೆ. ಸಿ ಮಾಧುಸ್ವಾಮಿ ,ಮಾಜಿ ಸಚಿವರು, ಶಿವಮೊಗ್ಗ ಶಾಸಕರಾದ ಕೆ. ಎಸ್ ಈಶ್ವರಪ್ಪನವರು, ರಾಜ್ಯಸಭಾ ಸದಸ್ಯರಾದ ಜಗ್ಗೇಶ್ ಅವರು, ಉತ್ಸಾಹಿ ಯುವ ಮೋರ್ಚಾ ಕಾರ್ಯಕರ್ತರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…