ಸಂಧ್ಯಾ ದೀಪ ಶಿವಮೊಗ್ಗ ಮತ್ತು ನಿವೃತ್ತ ಬ್ಯಾಂಕ್ ನೌಕರರ ಸಾಂಸ್ಕೃತಿಕ ವೇದಿಕೆ ವತಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಂಸ್ಥಾಪಕರ ದಿನಾಚರಣೆಯನ್ನು ನಗರದ ಕುವೆಂಪು ರಂಗ ಮಂದಿರದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಅಜ್ಜಂಪುರ ಮಂಜುನಾಥ್ ರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಜೆಡಿಎಸ್ ರಾಜ್ಯ ವಕ್ತಾರ ಎಂ ಶ್ರೀಕಾಂತ್ ರವರು ಸಂಧ್ಯಾ ದೀಪ ಶಿವಮೊಗ್ಗ ಮತ್ತು ನಿವೃತ್ತಿ ಬ್ಯಾಂಕ್ ನೌಕರರ ವತಿಯಿಂದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಮಾಡುತ್ತಿರುವುದು ಒಳ್ಳೆಯ ವಿಷಯ. ನಮ್ಮ ರಾಜ್ಯಕ್ಕೆ ಸರ್ ಎಂ ವಿಶ್ವೇಶ್ವರಯ್ಯನವರು ಐತಿಹಾಸಿಕ ಯೋಜನೆಗಳನ್ನು ತಂದುಕೊಟ್ಟಿದ್ದಾರೆ. ಅವರು ಮಾಡಿರುವ ಕೆಲಸ ಪ್ರಶಂಸನೀಯ ಎಂದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಯುವ ಮುಖಂಡ ಕೆ ಇ ಕಾಂತೇಶ್ , ಅಮೃತ್ ನೋನಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀನಿವಾಸ್ ಮೂರ್ತಿ ಸಂಧ್ಯಾ ದೀಪಾ ಅಧ್ಯಕ್ಷರಾದ ಶ್ರೀನಿವಾಸ ಪುರಾಣಿಕ ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…