ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸುಮಾರು 20 ಕೋಟಿ ವೆಚ್ಚದಲ್ಲಿ ಶಿಕಾರಿಪುರದಲ್ಲಿ 60 ಮತ್ತು ಶಿರಾಳಕೊಪ್ಪ ಪಟ್ಟಣದಲ್ಲಿ 12 ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಸತಿ ಗೃಹದ ಶಂಕುಸ್ಥಾಪನೆಯನ್ನು ಗೃಹ ಸಚಿವರಾದ ಆರಗ ಜಾನೇಂದ್ರ ,ಸಂಸದರಾದ ಬಿ. ವೈ ರಾಘವೇಂದ್ರ ನೆರವಿರಿಸಿದರು.

ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ ಅವರು, ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್, ಅರಣ್ಯ ನಿಗಮ ಉಪಾಧ್ಯಕ್ಷರಾದ ರೇವಣಪ್ಪ, ಪುರಸಭೆ ಅಧ್ಯಕ್ಷರಾದ ರೇಖಾ ಭಾಯಿ, ಸಿಪಿಐ ಲಕ್ಷ್ಮಣ್, ಎಸ್.ಐ ಪ್ರಶಾಂತ್, ರವಿಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…