ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಅಗ್ರಹಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನವ ಕರ್ನಾಟಕ ನಿರ್ಮಾಣ ವೇದಿಕೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯದ್ಯಕ್ಷ ಗೋ ರಮೇಶ ಗೌಡ ರವರು ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಮತ್ತು ದೇಶದ ಇತರ ರಾಜ್ಯಗಳಲ್ಲಿ ತಮ್ಮ ಸ್ವಂತ ಲಾಭಕ್ಕಾಗಿ ಪಕ್ಷಾಂತರ ಮಾಡುವ ಶಾಸಕರುಗಳು ಸಂಖ್ಯೆ ಹೆಚ್ಚಿದ್ದು ಕ್ಷೇತ್ರದ ಮತದಾರಿಗೆ ಅಭಿವೃದ್ಧಿ ಮತ್ತು ಇತರ ಕೆಲಸಗಳಲ್ಲಿ ಹಿನ್ನಡೆಯಾಗುತ್ತಿದೆ. ಅದರಿಂದ ಈ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಚುನಾವಣೆ ಆಯೋಗಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಹೇಳಿದರು. ಮುಂದಿನ ದಿನದಲ್ಲಿ ಕೇಂದ್ರ ಚುನಾವಣೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ಮಾಡುತ್ತೀವಿ ಎಂದು ಗೋ ರಮೇಶ್ ಗೌಡ ಹೇಳಿದರು.

ಈ ಸಂದರ್ಭದಲ್ಲಿ ಸಂತೋಷ್ , ದೇವೇಂದ್ರಪ್ಪ , ಅಸ್ಲಂ , ನಯನರಾಜು , ಪುಷ್ಪಾ ,ಫಯಾಜ್ ರಾಜು , ಆಸಿಫ್ , ಲಕ್ಷ್ಮಣ್ , ರಾಜು ನಾಯ್ಕ , ಮಂಜುಳಾ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…