ವಿನ್ ಲೈಫ್ ಟ್ರಸ್ಟ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಪೃಥ್ವಿ ರವರು ಇಂದು ಜ್ಯುವೆಲ್ ರಾಕ್ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇದೆ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ವಿನ್ ಲೈಫ್ ಮತ್ತು ಮೆಟ್ರೋ ಆಸ್ಪತ್ರೆ ಸಹಯೋಗದೊಂದಿಗೆ ಸಕ್ಕರೆ ಕಾಯಿಲೆ ನಿವಾರಣೆ ಮತ್ತು ನಿಯಂತ್ರಣಕ್ಕೆ ಆಲೋಪತಿ, ಆಯುರ್ವೇದ ಮತ್ತು ಯೋಗ ಸೇರಿದಂತೆ ಎಲ್ಲಾ ವೈದ್ಯಕೀಯ ಪದ್ಧತಿಗಳ ಸಮಾಗಮ ಹಾಗೂ ಮುಕ್ತ ಚರ್ಚೆಯನ್ನು 16 ಅಕ್ಟೋಬರ್ 2022 ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಕೆ ಎಸ್ ಈಶ್ವರಪ್ಪ ನವರು ಉದ್ಘಾಟಿಸಲಿದ್ದಾರೆ ಎಂದರು.

ಈ ಸಮಾವೇಶದಲ್ಲಿ ಸಕ್ಕರೆ ಕಾಯಿಲೆಗೆ ಸಂಬಂಧ ಪಟ್ಟಂತೆ ಆಧುನಿಕ ಆವಿಷ್ಕಾರಗಳು, ಬೃಹತ್ ವಸ್ತು ಪ್ರದರ್ಶನ, ಪ್ರಾತ್ಯಕ್ಷಿಕೆ, ಸಂವಾದ, ರಸಪ್ರಶ್ನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ.
ಎಲ್ಲರೂ ಈ ಸಮಾವೇಶದಲ್ಲಿ ಭಾಗವಹಿಸಿ ಸಕ್ಕರೆ ಕಾಯಿಲೆ ಕುರಿತಾಗಿ ಹೆಚ್ಚಿನ ಅರಿವು ಪಡೆದುಕೊಳ್ಳಬೇಕಾಗಿ ವಿನಂತಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿನ್ ಲೈಫ್ ಮ್ಯಾನೇಜಿಂಗ್ ಟ್ರಸ್ಟಿಗಳಾದ ಡಾII ಪೃಥ್ವಿ .ಬಿ. ಸಿ ಮತ್ತು ನಿರ್ದೇಶಕರುಗಳಾದ ಡಾII ಶಂಕರ್, ಡಾII ವಿಜಯ ಕುಮಾರ್, ಶ್ರೀ ರೆಹಮತ್ ,ಶ್ರೀ ಬದ್ರಿನಾಥ್ , ರೋಹಿತ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…