ಶಿವಮೊಗ್ಗ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷರಾಗಿ ಎಸ್. ಕೆ. ಭಾಸ್ಕರ್ ರವರನ್ನು ನೇಮಕ ಮಾಡಿ ಎಂ. ಶ್ರೀಕಾಂತ್ ರವರು ಆದೇಶ ಹೊರಡಿಸಿದ್ದಾರೆ.

ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ಧರಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಹಾಗೂ ಹಿಂದುಳಿದ ವರ್ಗಗಳ ವಿಭಾಗವನ್ನು ಬಲವರ್ಧನೆಗಾಗಿ ಪರಿಣಾಮಕಾರಿಯಾಗಿ ಸಂಘಟಿಸುವ ಪಕ್ಷದ ದಿಕ್ಕಿನಲ್ಲಿ ಕೆಲಸ ನಿರ್ವಹಿಸಬೇಕೆಂದು ಈ ಮೂಲಕ ಹೇಳಿದ್ದಾರೆ.ಜೆಡಿಎಸ್ ರಾಜ್ಯ ವಕ್ತಾರ ಎಂ. ಶ್ರೀಕಾಂತ್ ರವರು ಮತ್ತು ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ನೂತನ ಜಿಲ್ಲಾಧ್ಯಕ್ಷ ಭಾಸ್ಕರ್ ರವರಿಗೆ ಶುಭ ಕೋರಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…