ಇಡೀ ದಕ್ಷಿಣ ಭಾರತ ದಲ್ಲಿಯೇ ಪ್ರಥಮ ವೆನ್ನಲಾದ, ತುರ್ತು ಅಗ್ನಿ ಅವಘಡ ಸಂಧರ್ಬದಲ್ಲಿ, ಸುಮಾರು ೯೦ ಮೀಟರ್ ಎತ್ತರದ ವರೆಗೂ, ತಲುಪಿ, ಬೆಂಕಿಯನ್ನು ನಂದಿಸುವ ಹಾಗೂ ಅಪಾಯದಲ್ಲಿ ಸಿಲುಕಿದ ನಾಗರಿಕರನ್ನು ರಕ್ಷಿಸಲು ಅನುವಾಗುವ, ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ, ನಾಳೆ, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಲೋಕಾರ್ಪಣೆ ನೆರವೇರಿಸಿದರು.

ಈ ಸಂಬಂಧ, ಇಂದು ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದ ಆವರಣದಲ್ಲಿ
ಅಗ್ನಿ ಶಾಮಕ ಪಡೆಗೆ, ಅತ್ಯಂತ ಅಗತ್ಯ ವಾದ, ೯೦ ಮೀಟರ್ ಎತ್ತರಕ್ಕೆ ನಿಲುಕಲು ಸಾಧ್ಯವಾಗುವ, ಏಣಿಯನ್ನು,ಸುಮಾರು ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ಆಮದು ಮಾಡಿಕೊಂಡ ಭವ್ಯವಾದ ಸರ್ವ ಸುಸಜ್ಜಿತ ಹಾಗೂ ಆಧುನಿಕ ತಂತ್ರಜ್ಞಾನ ದ ಏಣಿಯನ್ನು ಸೇವೆಗೆ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ, ಎಲ್ಲಾ ಅಥಿತಿ ಗಣ್ಯರನ್ನು ಸ್ವಾಗತಿಸಿ, ಮಾತನಾಡಿದ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ವಿಶ್ವದಲ್ಲಿಯೇ ತಂತ್ರಜ್ಞಾನ ದಲ್ಲಿ
ಮುಂಚೂಣಿಲ್ಲಿರುವ ಬೆಂಗಳೂರು ನಗರದ ನಾಗರಿಕರ ಆಸ್ತಿ ಪಾಸ್ತಿ ಹಾಗೂ ಜನರ ಅಮೂಲ್ಯ ಜೀವ ರಕ್ಷಣೆಗೆ ಬೇಕಾದ ಎಲ್ಲಾ ಸಿದ್ಧತೆ ಗಳನ್ನು ಆದ್ಯತೆಯ ಮೇಲೆ ಮಾಡುತ್ತಿದೆ, ಎಂದು ತಿಳಿಸಿದರು.

ನಮ್ಮ ಸರಕಾರದ ಅವಧಿಯಲ್ಲಿ, ಗೃಹ ಇಲಾಖೆಯನ್ನು ಬಲಪಡಿಸಲು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿೂರಪ್ಪನವರು, ಹಾಗೂ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಅತ್ಯಂತ ಹೆಚ್ಚಿನ ಅನುದಾನ ಒದಗಿಸಿದ್ದಾರೆ. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು, ಬಲಪಡಿಸಲು ಹತ್ತು ಹಲವು ಕ್ರಮಗಳನ್ನು, ತೆಗೆದುಕೊಂಡ ಹಿನ್ನೆಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ ಸುಮಾರು ಎರಡು ಸಾವಿರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ, ಅಗ್ನಶಾಮಕದಳದ ಸೇವಾ ಘಟಕಗಳನ್ನು ಹೊಂದಿದ್ದು, ಇಲಾಖೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.

ವರದಿ ಪ್ರಜಾಶಕ್ತಿ…