ಏ ಐ ಸಿ ಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ರವರು ಇಂದು ಪದಗ್ರಹಣ ಮಾಡಿದರು.ಶಿವಮೊಗ್ಗದಲ್ಲಿ ನಿಕಟಪೂರ್ವ ಶಾಸಕರಾದ ಶ್ರೀ ಕೆ ಬಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರು ಮುಖಂಡರು ಸೇರಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮಹಾಪೌರರಾದ ಎಸ್ ಕೆ ಮರಿಯಪ್ಪ , ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ ಕುಮಾರ್ , ಮಾಜಿ ಸೂಡಾ ಅಧ್ಯಕ್ಷರಾದ ರಮೇಶ್ ಕುಮಾರ್ , ಭೋವಿ ಸಮಾಜದ ಅಧ್ಯಕ್ಷರಾದ ರವಿಕುಮಾರ್ , ವಿಜಯ್ ಕುಮಾರ್ (ದನಿ) ಯುವ ಕಾಂಗ್ರೆಸ್ ಅಧ್ಯಕ್ಷರಾದ ಗಿರೀಶ್ ಕುಮಾರ್ , ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಉಪಾಧ್ಯಕ್ಷರಾದ ರಂಗನಾಥ್ , ಮಾಜಿ ಪಾಲಿಕೆ ಸದಸ್ಯರಾದ ಸೋಮಸುಂದರ್ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…