ದೆಹಲಿ ನ್ಯೂಸ್…

ದೆಹಲಿಯಲ್ಲಿ ನೂತನ ಎಐಸಿಸಿ ಅಧ್ಯಕ್ಷರಾದ ಮಲ್ಲಿಖಾರ್ಜುನ ಖರ್ಗೆ ರವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಭೇಟಿ ಮಾಡಿ ಶುಭಾಶಯ ಕೋರಿದರು. ಸುಂದರೇಶ್ ಮಾತನಾಡಿ ನೂತನ ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ರವರು ಆಯ್ಕೆಯಾಗಿರುವುದು ನಮ್ಮೆಲ್ಲರಿಗೆ ಸಂತೋಷ ತಂದಿದೆ.ಮುಂದಿನ ದಿನಗಳಲ್ಲಿ ಕರ್ನಾಟಕ ಮತ್ತು ದೇಶದಲ್ಲಿ ಕಾಂಗ್ರೆಸ್ ಬದಲಾವಣೆ ಹೊಸ ರೂಪ ಬರುತ್ತದೆ ಎಂದು ಹೇಳಿದರು.

ಸಂದರ್ಭದಲ್ಲಿ ಮುಖಂಡರಾದ ಸೂರಜ್ ಹೆಗ್ಡೆ , ಮುಜಾಮಿಲ್ ಹುಸೇನ್ , ಡಾ ರಾಘವೇಂದ್ರ ಕದ್ರಿ , ಡಾ ಪ್ರದೀಪ್ , ದಿನೇಶ್ ಗುಂಡೂರಾವ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…