ಶಿಕಾರಿಪುರ ನ್ಯೂಸ್…

ಶಿಕಾರಿಪುರ ತಾಲೂಕು ಆಡಳಿತ, ಶಿಕಾರಿಪುರ ಕನ್ನಡ ಯುವಕ ಸಂಘ ಮತ್ತು ಭದ್ರಾಪುರದ ಕನ್ನಡ ಸಂಘದ ವತಿಯಿಂದ ಇಂದು ೬೭ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಭಾಗವಹಿಸಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಮನಗಳನ್ನು ಸಲ್ಲಿಸಿದರು. ಜೊತೆಯಲ್ಲಿ ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳು ಕೋರಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಬದ್ರಾಪುರ ಕನ್ನಡ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…