ಶಿಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆ ಆಟೋ ಚಾಲಕರ ಆವರಣದಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಕರವೇ ಯುವ ಸೇನೆ ವತಿಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕರವೇ ಯುವ ಸೇನೆಯ ಕಾನೂನು ಸಲಹೆಗಾರರಾದ ಅನಿಲ್ ಕುಮಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು.

ಧ್ವಜಾರೋಹಣ ಮುಗಿದ ನಂತರ ಎಲ್ಲಾ ಕಾರ್ಯಕರ್ತರಿಗೆ ಸಿಹಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಸ್ಟಾರ್ ಪತ್ರಿಕೆ ಸಂಪಾದಕರಾದ ವಿಷ್ಣು ಪ್ರಸಾದ್ ಕರವೇ ಯುವ ಸೇನೆಯ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷರಾದ ಶಿವಕುಮಾರ್ ಎಸ್‌ ಬಿ ನಗರ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ನೂರಾರು ಕಾರ್ಯಕರ್ತರು ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ ಪ್ರಜಾಶಕ್ತಿ…