ಶಿವಮೊಗ್ಗ : ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆ ಮೂಲಕ ಮೌಲ್ಯಯುತ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಮಗೆ ನಮ್ಮ ಶಿವಮೊಗ್ಗದಲ್ಲಿ ಸ್ಟಾರ್ಟ್ ಆಪ್ ಆರಂಬಿಸಲು ಇದು ಸದಾವಕಾಶ, ಏಕೆಂದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಸಂಪರ್ಕಕಾಗಿ ನ್ಯಾಷನಲ್ ಹೈವೇಗಳು, ಪ್ರವಾಸೋದ್ಯವಾದ ಅಭಿವೃದ್ಧಿ ಕೆಲಸಗಳು ಜೊತೆಗೆ ಬರುವ ಜನವರಿಯಲ್ಲಿ ವಿಮಾನ ನಿಲ್ದಾಣವನ್ನು ಕೂಡ ಉದ್ಘಾಟಿಸಲಿದ್ದೇವೆ, ಸಮಯಕ್ಕೆ ಗೌರವನ್ನು ನೀಡುವ ಕೈಗಾರಿಕಾ ಉದ್ಯಮಿಗಳು ಇಲ್ಲಿ ಬಂದು ಉದ್ಯೋಗ ಸೃಷ್ಟಿ ಮಾಡುವ ನಿರೀಕ್ಷೆಯಲ್ಲಿದ್ದೇವೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ತಿಳಿಸಿದರು.

ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ 32 ವಾರ್ಷಿಕೋತ್ಸವ ಅಂಗವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸೇವೆ ಸಲ್ಲಿಸುತ್ತಿರುವ ನಮ್ಮ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಸನ್ಮಾನಿಸಿದರು.

ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರು, ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ,
ವಿವಿಧ ಶಾಖಾ ಮಠದ ಶ್ರೀಗಳು, ಶ್ರೀಮಠದ ಆಡಳಿತ ಮಂಡಳಿಯ ಸದಸ್ಯರು, ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…