ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಶಾಸಕರಾದ ಶ್ರೀ ಕೆ.ಬಿ ಅಶೋಕ ನಾಯ್ಕ ರವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

👉ಆದ್ರಿಹಳ್ಳಿ-ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (15.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

👉ದಿಗ್ಗೆನಹಳ್ಳಿ -ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (20.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

👉ಸೈದರಕಲ್ಲಹಳ್ಳಿ -ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ಹಾಗೂ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (50.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

👉ಕುರುಬರ ವಿಠಲಾಪುರ ಗ್ರಾಮದಲ್ಲಿ ಪರಿಶಿಷ್ಟ ಪಂಗಡಗಳ ಜಾತಿ ಕಾಲೋನಿಯಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (15.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ.

ಸೈದರಕಲ್ಲಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತರುಗಳ ಸಾರ್ವಜನಿಕರ ಸಭೆ ನಡೆಸಿ. ತಮ್ಮ ಅವಧಿಯಲ್ಲಿ ಅದಂತಹ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದರು.

ಕಲ್ಲಜ್ ನಾಳ್ ಮಂಜುನಾಥ್, ಮಂಡಲ ಅಧ್ಯಕ್ಷರು, ಮಲ್ಲೇಶ್, ಉಜ್ಜಿನಪ್ಪ, ಜಗದೀಶ್, ಸುಬ್ರಹ್ಮಣ್ಯ, ಶ್ರೀನಿವಾಸ್ ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರುಗಳು, ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…