ರಾಜ್ಯ ವಿಪತ್ತು ಹಾಗೂ ತುರ್ತು ಸೇವೆಗಳ ಪಡೆಯನ್ನು, ಇನ್ನಷ್ಟು ಹೆಚ್ಚು ಬಲ ಪಡಿಸಲು, ಪ್ರತಿ ಮೂರು ಜಿಲ್ಲೆ ಗಳಿಗೆ ಒಂದರಂತೆ, ಎಸ್ ಡಿ ಆರ್ ಎಫ್ ಪಡೆಗಳನ್ನು ನಿಯೋಜಿಸಲು ರಾಜ್ಯ ಸರಕಾರ, ಯೋಜನೆಯನ್ನು ರೂಪಿಸಿದೆ. ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ರಾಜ್ಯ ಪೌರ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹಾಗೂ ಎಸ್ ಡಿ ಆರ್ ಎಫ್ ನಿರ್ದೇಶನಾಲಯ ವತಿಯಿಂದ, ರಾಜಭವನ ದಲ್ಲಿ ಆಯೋಜಿಸಲಾದ, ಜೀವದ ಹಂಗನ್ನು ತೊರೆದು, ಸಂಕಷ್ಟಕ್ಕೆ ಒಳಗಾದ ಜನತೆಯನ್ನು ರಕ್ಷಿಸಿದ, ಹಾಗೂ ವಿಶಿಷ್ಟ ಸೇವೆಗೈದ, ಸಿಬ್ಬಂದಿಗಳಿಗೆ, ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಕೃತಿಕ ಸಂಕಷ್ಟದ ಸಮಯದಲ್ಲಿ, ಕ್ಷಿಪ್ರವಾಗಿ ಸೇವೆ ಸಲ್ಲಿಸಲು ಅನುಕೂಲವಾಗಲು, ಸಹಾಯಕ ವಾಗುವಂತೆ, ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.ನಾಗರಿಕರ ಸುರಕ್ಷತೆ ಹಾಗೂ ಆಸ್ತಿ ಪಾಸ್ತಿ ಗಳು, ಹಾಗೂ ಸಾರ್ವಜನಿಕ ಸೊತ್ತುಗಳ ರಕ್ಷಣೆ ಮಾಡಲು, ಸರಕಾರ ಬದ್ಧವಾಗಿದೆ ಎಂದರು.

ಹಲವಾರು ವರ್ಷಗಳ ನಂತರ, ರಾಜ್ಯ ಅಗ್ನಿ ಶಾಮಕ ದಳ ವನ್ನು ಬಲಪಡಿಸಲು ಸುಮಾರು 1547 ವಿವಿಧ ದರ್ಜೆಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಹಾಗೂ ತರಭೇತಿ ನೀಡಲಾಗುತ್ತಿದೆ ಎಂದ ಸಚಿವರು, ಅವಘಡದ ಸಂದರ್ಭದಲ್ಲಿ ಅತ್ಯಂತ ಎತ್ತರದ ಕಟ್ಟಡವನ್ನೂ ತಲುಪಲು ಅನುಕೂಲವಾಗುವಂತೆ, ಸುಮಾರು 30 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಏರಿಯಲ್ ಲ್ಯಾಡರ್ ಅನ್ನು ಇಲಾಖೆಗೆ ಸಮರ್ಪಿಸಲಾಗಿದೆ, ಎಂದರು.

ಸಮಾರಂಭದಲ್ಲಿ ಸುಮಾರು 61 ಸಿಬ್ಬಂದಿಗಳಿಗೆ, ಪದಕವನ್ನು, ಘನತೆವೆತ್ತ ರಾಜ್ಯಪಾಲರಾದ, ಶ್ರೀ ತಾವರ್ ಚಂದ್ ಗೆಹ್ಲೋಟ್, ಅವರು, ಪ್ರದಾನ ಮಾಡಿದರು.

ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ರಜನೀಶ್ ಗೋಯಲ್, ಶ್ರೀ ಅಮರ ಕುಮಾರ್ ಪಾಂಡೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಹಾಗೂ ಇತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…