ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ರಾಜ್ಯ ಸರ್ಕಾರದ ಆದೇಶದಂತೆ ಏಕಕಾಲದಲ್ಲಿ ನೂತನ ಶಾಲಾ ಕೋಠಡಿಗಳ (ವಿವೇಕಾ) ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ ಹಾಗೂ ಭದ್ರಾವತಿ ತಾಲ್ಲೂಕಿನ ಸಿದ್ಲಿಪುರು, ಹೊಳೆಹೊನ್ನೂರು ಗ್ರಾಮಗಳಲ್ಲಿ ನೆರವೇರಿಸಿದರು.

ನಂತರ ಮಾತನಾಡಿದ ಅವರು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಹಾಗೂ ಶಿಕ್ಷಣ ಸಚಿವರಾದ ನಾಗೇಶ್ ರವರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಎಸ್.ಡಿ.ಎಮ್.ಸಿ ಕಮಿಟಿ ಸದಸ್ಯರುಗಳು, ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರುಗಳು, ಉಪಸ್ಥಿತರಿದ್ದರು..

ವರದಿ ಪ್ರಜಾಶಕ್ತಿ…