ಶಿವಮೊಗ್ಗ ಬಂಟರ ಸಂಘ…

ಶಿವಮೊಗ್ಗದ ಪ್ರತಿಷ್ಠಿತ ಸಮಾಜಗಳಲ್ಲಿ ಒಂದಾದ ಗೋಪಾಲಗೌಡ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಬಂಟ ಸಮಾಜದ ಸಮುದಾಯ ಭವನ ಕಟ್ಟಡಕ್ಕೆ ಕರ್ನಾಟಕ ಬಂಟ ಸಮಾಜದ ಕೊಡುಗೈ ದಾನಿ, ಹೃದಯ ಶ್ರೀಮಂತ ಹಾಗೂ ಬಡವರ ಬಂಧು ಎಂದೇ ಪ್ರಖ್ಯಾತರಾದ ಬೆಂಗಳೂರು ಎಂ ಆರ್ ಜಿ ಗ್ರೂಪ್ ನ ಛೇರ್ಮನ್ ಶ್ರೀ ಪ್ರಕಾಶ್ ಶೆಟ್ಟಿ ಇವರು 50 ಲಕ್ಷ ರೂ.ಗಳ ದೇಣಿಗೆ ನೀಡಿರುತ್ತಾರೆ.

ಸಮಾಜದ ಎಲ್ಲ ವರ್ಗದ ಜನರಿಗೆ ಪ್ರಮುಖವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಬಡವರು, ನಿರ್ಗತಿಕರು, ಪ್ರತಿಭಾವಂತರು ಹಾಗೂ ಕೊರೋನಾ ಸಂದರ್ಭದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟಸಾಧ್ಯವಾಗಿದ್ದ ಸಾವಿರಾರು ಜನರಿಗೆ ಕೊಟ್ಯಂತರ ರೂ.ಗಳ ಹಣ ಸಹಾಯ, ಆಹಾರ ಸಾಮಗ್ರಿಗಳು, ಔಷಧಿಗಳು, ನಿರ್ಗತಿಕರಿಗೆ ವಸತಿ, ಶಿಕ್ಷಣ ಹೀಗೆ ಹಲವು ಹತ್ತು ರೀತಿಯಲ್ಲಿ ಸಹಾಯ ಹಸ್ತ ಚಾಚಿದ ಮಹಾದಾನಿ ಶ್ರೀ ಪ್ರಕಾಶ್ ಶೆಟ್ಟಿಯವರು. ಇಂತಹ ಸಮಾಜಮುಖಿ ಆದರ್ಶ ವ್ಯಕ್ತಿಗಳು ನಮ್ಮ ಮಧ್ಯೆ ಇರುವುದು ನಮ್ಮ ಪಾಲಿನ ಸುದೈವ.

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಕಾರ್ಯಕಾರಿ ಸಮಿತಿ, ಕಟ್ಟಡ ಸಮಿತಿ, ಹಿಂದಿನ ಅಧ್ಯಕ್ಷರುಗಳು ಮತ್ತು ಸಮಸ್ತ ಸಮಾಜ ಬಾಂಧವರ ಪರವಾಗಿ ಶ್ರೀ ಕೆ. ಪ್ರಕಾಶ್ ಶೆಟ್ಟಿ ಇವರಿಗೆ ಹೃದಯಪೂರ್ವಕ ಅಭಿನಂದನೆಗಳು ಮತ್ತು ಸಾಷ್ಠಾಂಗ ಪ್ರಣಾಮಗಳನ್ನು ಸಲ್ಲಿಸುತ್ತೇವೆ ಎಂದು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಡಾ. ಎ. ಸತೀಶ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರಾದ ಶ್ರೀ ಎಸ್. ಕೃಷ್ಣ ಶೆಟ್ಟಿ ಹಾಗೂ ಸಂಘದ ನಿರ್ದೇಶಕರು ಮತ್ತು ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ಶ್ರೀ.ದಿವಾಕರ್ ಶೆಟ್ಟಿ ಇವರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮಂಜುನಾಥ್ ಶೆಟ್ಟಿ…