ಶಿವಮೊಗ್ಗ ನಗರದ ಜೆ ಹೆಚ್ ಪಟೇಲ್ ಬಡಾವಣೆಯಲ್ಲಿ ನೂತನ ವೀರಶೈವ ಸಾಂಸ್ಕೃತಿಕ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರು ಶ್ರೀಮದ್‌ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರೊಂದಿಗೆ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಸದರಾದ ಬಿ ವೈ ರಾಘವೇಂದ್ರ ಅವರು, ಮಾಜಿ ಸಚಿವರಾದ ಕೆ. ಎಸ್. ಈಶ್ವರಪ್ಪ ವೀರಶೈವ ಕಲ್ಯಾಣ ಮಂದಿರ ಅಧ್ಯಕ್ಷರಾದ ಈಶ್ವರಯ್ಯ, ಷಡಾಕ್ಷರಿ ,ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ,ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್,ಜ್ಯೋತಿಪ್ರಕಾಶ್‌, ಶ್ರೀ ವೀರಶೈವ ಕಲ್ಯಾಣ ಮಂದಿರ ಗೌರವ ಕಾರ್ಯದರ್ಶಿ ಎನ್. ಜಿ. ರಾಜಶೇಖರ್, ವಿವಿಧ ಮಠದ ಶ್ರೀಗಳು ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…