ಮಂಗಳೂರು ನ್ಯೂಸ್…

ಮಂಗಳೂರಿನಲ್ಲಿ 3 ದಿನಗಳ ಹಿಂದೆ ನಗರದ ಪಂಪ್ ವೆಲ್ ಹತ್ತಿರ ಆಟೋದಲ್ಲಿ ಕುಕ್ಕರ್ ಸ್ಪೋಟಗೊಂಡ ಘಟನೆ ನಡೆದಿತ್ತು. ಘಟನೆಯ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಮನೆಗೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಭೇಟಿ ನೀಡಿದರು.

ಆರೋಗ್ಯ ವಿಚಾರಿಸಿ ವೈಯಕ್ತಿಕವಾಗಿ 50000 ರೂ ಸಹಾಯ ನೀಡಿ ಕುಟುಂಬದವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.ಈ ಸಂದರ್ಭದಲ್ಲಿ ಮಂಗಳೂರು ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…