ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಲವಟ್ಟಿ ಗ್ರಾಮದಲ್ಲಿ ಪಂಚಾಯತ್ ರಾಜ್ ಇಲಾಖೆ ಮುಖಾಂತರ ನಿರ್ಮಿಸಲಾಗುತ್ತಿರುವ ಹಾಲು ಉತ್ಪಾದಕರ ಸ್ವಸಹಾಯ ಸಂಘದ ಕಟ್ಟಡ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ದಿನೇಶ್ ಹಾಲು ಒಕ್ಕೂಟ ನಿರ್ದೇಶಕರು, ಸುಬ್ಬಣ್ಣ ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಯಲವಟ್ಟಿ ಶಶಿ, ಶೇಖರ್ ನಾಯ್ಕ, ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…