ಸಾಗರ ನ್ಯೂಸ್…

ಸಾಗರದ ಮೊಬೈಲ್ ವರ್ಡ್ ಎಂಬ ಮೊಬೈಲ್ ಅಂಗಡಿಯಲ್ಲಿ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ.ಸೊರಬ ರಸ್ತೆಯಲ್ಲಿರುವ ಮೊಬೈಲ್ ಶಾಪ್ ನಲ್ಲಿ 29ರಂದು ಮೊಬೈಲ್ ಮತ್ತು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದಾರೆ.ಅಂಗಡಿಯ ಮಾಲಿಕ ಹತ್ತಿರದ ಪೊಲೀಸ್ ಠಾಣೆಯಲ್ಲಿ ವಿಷಯವನ್ನು ತಿಳಿಸಿದ್ದಾರೆ.

ಅಂಗಡಿಯ ಮಾಲಿಕ ಹೇಳಿಕೆ ಪಡೆದು ಪ್ರಕರಣವನ್ನು ದಾಖಲಿಸಿ, ಶ್ರೀ ರೋಹನ್ ಜಗದೀಶ್ ಐಪಿಎಸ್, ಎಎಸ್.ಪಿ ಸಾಗರ ಉಪ ವಿಭಾಗ ಮತ್ತು ಶ್ರೀ ಸೀತಾರಂ, ಪಿಐ ಸಾಗರ ಟೌನ್ ರವರ ಮಾರ್ಗದರ್ಶನದಲ್ಲಿ ಶ್ರೀ ಡಿ. ಟಿ ಸಾಗರ್ ಕರ್ ರವರ ನೇತೃತ್ವದಲ್ಲಿ ಸಿಬ್ಬಂಧಿಗಳಾದ ರತ್ನಾಕರ್, ನಾಗರಾಜ್, ಶ್ರೀಧರ್ ಮತ್ತು ಶಿಲ್ಪಾ ರವರುಗಳನ್ನೊಳಗೊಂಡ ತಂಡವು ಪ್ರಕರಣ ವರದಿಯಾದ ಒಂದು ದಿನದ ಒಳಗೆ ಆರೋಪಿತನಾದ ವಿನಯ್ ಎಸ್ ಎಂ, 24 ವರ್ಷ, ಜೆಪಿ ನಗರ ಸಾಗರ ಟೌನ್ ಈತನನ್ನು ದಸ್ತಗಿರಿ ಮಾಡಿ, ಅಂದಾಜು ಮೌಲ್ಯ 71,000/- ರೂಗಳ 1ಲ್ಯಾಪ್ ಟಾಪ್ ಮತ್ತು 8 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರ್ ಪಡಿಸಲಾಗಿರುತ್ತದೆ.

ಸದರಿ ತಂಡ ಉತ್ತಮ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಮಿಥುನ್ ಕುಮಾರ್ ಶಿವಮೊಗ್ಗ ಜಿಲ್ಲೆ ರವರು ಅಭಿನಂದಿಸಿದ್ದಾರೆ.

ವರದಿ ಪ್ರಜಾಶಕ್ತಿ…