ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ, ತಾಲೂಕು ತನಿಖಾ ಇಲಾಖೆಯಲ್ಲಿ ಪ್ರಮುಖ ಪಾತ್ರವಹಿಸಿದ ಪೊಲೀಸ್ ಅಧಿಕಾರಿಗಳಿಗೆ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರು ಸನ್ಮಾನಿಸಿದರು.

ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ 2013ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸಹಾಯಕ ತನಿಖಾಧಿಕಾರಿಗಳಾದ ಶ್ರೀ ರಾಜಶೇಖರ್ ಶೆಟ್ಟಿಗಾರ್, ಹೆಚ್.ಸಿ. ಮತ್ತು ವಿನೋಬನಗರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸಹಾಯಕ ತನಿಖಾಧಿಕಾರಿಗಳಾದ ಶ್ರೀ ಸುರೇಶ್, ಹೆಚ್.ಸಿ ಹಾಗೂ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆಗೆ ಯತ್ನ ಪ್ರಕರಣದ ಸಹಾಯಕ ತನಿಖಾಧಿಕಾರಿಗಳಾದ ಶ್ರೀ ಮಂಜಪ್ಪ. ಟಿ.ಪಿ, ಎಎಸ್ಐ ರವರು ಆಯಾ ಪ್ರಕರಣಗಳಲ್ಲಿ ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

ಇವರ ಈ ಉತ್ತಮ ಕಾರ್ಯಕ್ಕೆ 6ರಂದು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿದರು.

ವರದಿ ಪ್ರಜಾಶಕ್ತಿ…