ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಜಾತ್ಯತೀತ ಜನತಾದಳ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ವಹಿಸಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೂತ್ ಮಟ್ಟದಿಂದ ಪಕ್ಷ ಸಂಘಟಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿದು ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದರು. ಜಿಲ್ಲೆಗೆ ಫೆಬ್ರವರಿ 16ರಂದು ಪಂಚರತ್ನ ಯಾತ್ರೆ ಆಗಮಿಸಲಿದ್ದು , ಕುಪ್ಪಳಿಂದ ಯಾತ್ರೆ ಹೊರಟಲಿದ್ದು ಯಾತ್ರೆಗೆ ಕುಮಾರಸ್ವಾಮಿ ರವರು ಚಾಲನೆ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರಾನಾಯ್ಕ್ , ಭದ್ರಾವತಿ ವಿಧಾನಸಭಾ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡ್ರು , ತೀರ್ಥಳ್ಳಿ ವಿಧಾನಸಭಾ ಅಭ್ಯರ್ಥಿ ರಾಜಾರಾಮ್ , ರಾಮಕೃಷ್ಣ , ನಾಗರಾಜ್ ಕಂಕರಿ , ಬಸವರಾಜ್ , ಕಾಂತರಾಜ್ , ಪಾಲಾಕ್ಷಿ , ತ್ಯಾಗರಾಜ್ ಸಿದ್ದಪ್ಪ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…