ಶಿವಮೊಗ್ಗ ಜಿಲ್ಲಾ ಪೋಲೀಸ್ ನ ಡಿಎಆರ್ ಪೊಲೀಸ್‌ ಕವಾಯತು ಮೈದಾನದಲ್ಲಿ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ರವರ ನೇತೃತ್ವದಲ್ಲಿ ವಾರದ ಕವಾಯತು ನಡೆಯಿತು. ನಂತರ ಮಾತನಾಡಿದ ಅವರು ಅಪರಾಧ ತಡೆಗಟ್ಟುವಿಕೆಯಲ್ಲಿ ಪೊಲೀಸರ ಪಾತ್ರ ಬಹಳ ಮಹತ್ವವಾದದ್ದು.ಅದನ್ನು ನಮ್ಮ ಇಲಾಖೆಯ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ ಎಂದರು.

ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿ COP OF THE MONTH ಆಗಿ ಆಯ್ಕೆಯಾದ ಮತ್ತು ಇಲಾಖಾ ವಾಹನಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕವಾಯತಿನಲ್ಲಿ ಡಿವೈಎಸ್.ಪಿ ಡಿಎಆರ್‌, ಶಿವಮೊಗ್ಗ, ಡಿವೈಎಸ್.ಪಿ ಶಿವಮೊಗ್ಗ ಉಪ ವಿಭಾಗ ಹಾಗೂ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂಧಿಗಳು ಹಾಜರಿದ್ದರು.

ವರದಿ ಪ್ರಜಾಶಕ್ತಿ…