ಭದ್ರಾವತಿಯಲ್ಲಿ ಸಾರ್ವಜನಿಕರ ಬಂದ ದೂರಿನ ಮೇರೆಗೆ ಆಹಾರ ಇಲಾಖೆಯ ಸಹಾಯ ನಿರ್ದೇಶಕರಾದ ಮಲ್ಲಪ್ಪ ಮತ್ತು ಗಾಯತ್ರಿ ದೇವಿ ತಂಡ ನ್ಯಾಯ ಬೆಲೆ ಅಂಗಡಿ ಮೇಲೆ ದಾಳಿ ನಡೆಸಿದ್ದಾರೆ.

ದಿ 7ರಂದು ಭದ್ರಾವತಿಯ ಭದ್ರಾ ಕಾಲೋನಿಯಲ್ಲಿರುವ ವಿನೋದ್ ಕುಮಾರ್ ನ್ಯಾಯಬೆಲೆ ಅಂಗಡಿಯಲ್ಲಿ ಪ್ರತಿ ಪಡಿತರ ಚೀಟಿಗೆ 10ರೂ ತೆಗೆದುಕೊಳ್ಳುತ್ತಿದ್ದು ಸಾರ್ವಜನಿಕರು ಆಹಾರ ಇಲಾಖೆ ದೂರು ನೀಡಿದ್ದು ದೂರಿನ ಅನ್ವಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಪನಿರ್ದೇಶಕರಿಗೆ ವರದಿ ಸಲ್ಲಿಸಿ ನಂತರ ದಾಳಿಯಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾರದಿಂದ ಹಣ ಪಡೆದುಕೊಳ್ಳುತ್ತಿದ್ದನ್ನು ಖಚಿತಪಡಿಸಿ ಅಂಗಡಿಯ ಪರವಾನಗಿಯನ್ನು ರದ್ದುಪಡಿಸಲಾಗಿದೆ ಎಂದು ಇಲಾಖೆ ಅಧಿಕಾರಿ ಮಲ್ಲೇಶ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂತರ ಪಡಿತರದಾರರ ಅನುಕೂಲಕೊಸ್ಕರ ಹತ್ತಿರದ ಕೃಷ್ಣ ಜಿ ರಾವ್ ನ್ಯಾಯ ಬೆಲೆ ಅಂಗಡಿಗೆ ಈ ಅಂಗಡಿಯನ್ನು ಲಗತಿಸಿದ್ದಾರೆ. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಮಲ್ಲಪ್ಪ ಎ ಕೆ ಹಾಗೂ ಶ್ರೀಮತಿ ಗಾಯತ್ರಿ ದೇವಿ ಆಹಾರ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…